ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
Cross references
ಆದದರಿಂದ ದಾವೀದನು ಹೆಚ್ಚು ಕಡಿಮೆ ಆರು ನೂರು ಮಂದಿಯಾದ ತನ್ನ ಜನರು ಎದ್ದು ಕೆಯಾಲಾವನ್ನು ಬಿಟ್ಟು ಹೊರಟು ತಾವು ಹೋಗಬೇಕಾದಲ್ಲಿಗೆ ಹೋದರು. ದಾವೀದನು ಕೆಯಾಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಅವನು ಹೊರಡುವದನ್ನು ನಿಲ್ಲಿಸಿಬಿಟ್ಟನು.
ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
ಅವರು ಊಟಕ್ಕಾಗಿ ಅಲೆದಾಡಲಿ; ತೃಪ್ತಿ ಯಾಗದೆ ಗುಣಗುಟ್ಟಲಿ.
ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.