ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
Cross references
ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.