ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
Cross references
ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು.
ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು.
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.