ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
Cross references
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಮಹೋನ್ನತನ ಬಾಯಿಂದ ಕೆಟ್ಟದ್ದೂ ಒಳ್ಳೆಯದೂ ಹೊರಡುವದಿಲ್ಲವೇ?
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.