ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
Cross references
ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು.
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.