Home Bibles 2 ಸಮುವೇಲ 16:23 · ಕನ್ನಡ ಬೈಬಲ್
2 ಸಮುವೇಲ 16:23 · ಕನ್ನಡ ಬೈಬಲ್

ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.

Cross references

ಅಂಕೆಗಳ ಪುಸ್ತಕ 27:21

ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.

1 ಸಮುವೇಲ 30:8

ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.

2 ಸಮುವೇಲ 15:12

ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.

2 ಸಮುವೇಲ 17:14

ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.

2 ಸಮುವೇಲ 17:23

ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.

ಯೋಬ 5:12

ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.

ಯೋಬ 28:28

ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.

ಕೀರ್ತನೆಗಳು 19:7

ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.

ಕೀರ್ತನೆಗಳು 28:2

ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.

ಸಭಾಪ್ರಸಂಗಿ 10:1

ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.

ಯೆರೆಮಿಯ 4:22

ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.

ಯೆರೆಮಿಯ 8:9

ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.

ಮತ್ತಾಯ 11:25

ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಲೂಕ 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

ರೋಮಾಪುರದವರಿಗೆ 1:22

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

1 ಕೊರಿಂಥದವರಿಗೆ 3:19

ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

ಯಾಕೋಬ 3:13

ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.

1 ಪೇತ್ರ 4:11

ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ

Interlinear

Choose Theme