Home Bibles 2 ಸಮುವೇಲ 17:14 · ಕನ್ನಡ ಬೈಬಲ್
2 ಸಮುವೇಲ 17:14 · ಕನ್ನಡ ಬೈಬಲ್

ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.

Cross references

ಆದಿಕಾಂಡ 32:28

ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.

ನಿರ್ಗಮಕಾಂಡ 9:16

ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.

ದ್ವಿತೀಯೋಪದೇಶಕಾಂಡ 2:30

ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.

ಯೆಹೋಶುವ 11:20

ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.

2 ಸಮುವೇಲ 15:31

ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.

2 ಸಮುವೇಲ 15:34

ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.

2 ಸಮುವೇಲ 16:23

ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.

2 ದಿನವೃತ್ತಾಂತ 10:15

ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.

2 ದಿನವೃತ್ತಾಂತ 25:16

ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

2 ದಿನವೃತ್ತಾಂತ 25:20

ಆದರೆ ಅಮ ಚ್ಯನು ಕೇಳದೆಹೋದನು. ಯಾಕಂದರೆ ಅವರು ಎದೋ ಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ ಅವರನ್ನು ಶತ್ರುಗಳ ಕೈಯಲ್ಲಿ ಒಪ್ಪಿಸುವ ಹಾಗೆ ಇದು ದೇವರಿಂದ ಆಯಿತು.

ಯೋಬ 5:12

ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.

ಯೋಬ 12:17

ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.

ಕೀರ್ತನೆಗಳು 9:16

ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.

ಕೀರ್ತನೆಗಳು 33:9

ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.

ಸಾಮೇತಿಗಳು 19:21

ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಯೆಶಾಯ 8:10

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

ವಿಲಾಪಗಳು 3:37

ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?

ಆಮೋಸ 9:3

ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.

ಲೂಕ 16:8

ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.

1 ಕೊರಿಂಥದವರಿಗೆ 1:19

ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.

1 ಕೊರಿಂಥದವರಿಗೆ 3:19

ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

Interlinear

Choose Theme