ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
Cross references
ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
ಆ ದಿವಸಗಳಲ್ಲಿ ಹಿಜ್ಕೀಯನು ಮರಣಕರರೋಗದಲ್ಲಿ ಬಿದ್ದಿದ್ದನು. ಆಗ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಬದುಕದೆ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.