ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.
Cross references
ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.
ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು.
ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.
ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
ಇಗೋ, ಅವನು ಮೂವತ್ತು ಮಂದಿಯಲ್ಲಿ ಘನವುಳ್ಳವನಾಗಿದ್ದನು; ಆದರೆ ಮೂವರ ಕೂಡ ಸೇರದೆ ಇದ್ದನು. ದಾವೀದನು ಅವನನ್ನು ತನ್ನ ಕಾವಲಿ ನವರ ಮೇಲೆ ಇಟ್ಟನು.
ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್ಥ ದಾವೀದ್ ಸಮುವೇಲ್ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವದಕ್ಕೆ ನನಗೆ ಸಮಯ ಸಾಲದು.