ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
Cross references
ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆ ಯನ್ನು ತೆಗೆದು ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದು ಕೊಂಡು ಅವನು ಆಯಾಸದಿಂದ ಬಹಳ ನಿದ್ರೆ ಮಾಡುತ್ತಿರುವಾಗ ಮೆಲ್ಲಗೆ ಅವನ ಬಳಿಗೆ ಬಂದು ಅವನ ಕಣತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿದಳು, ಅವನು ಸತ್ತನು.
ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
ಆಗ ಇಗೋ, ಅರಸನು ಅಬ್ಷಾಲೋಮನಿ ಗೋಸ್ಕರ ಅತ್ತು ದುಃಖಪಡುತ್ತಾ ಇದ್ದಾ ನೆಂದು ಯೋವಾಬನಿಗೆ ತಿಳಿಸಲ್ಪಟ್ಟಿತು.
ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.