ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
Cross references
ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.
ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.
ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.