ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.
Cross references
ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.