ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
Cross references
ನೀನು ನಿನ್ನ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಯಾಕಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಗುಂಪುಗಳುಳ್ಳವನಾದೆನು.
ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.
ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.
ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
ಏಳು ವರುಷದ ತರುವಾಯ ಏನಾಯಿತಂದರೆ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರಿಗಿ ಬಂದು ತನ್ನ ಮನೆಗೋಸ್ಕರವೂ ಹೊಲಕ್ಕೋಸ್ಕರವೂ ಅರಸನಿಗೆ ಮೊರೆಯಿಟ್ಟಳು.