ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
Cross references
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.
ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು: ಆದರೆ ರೂತಳು ಆಕೆಯನ್ನು ಅಂಟಿಕೊಂಡಳು.
ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು.
ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.