ಆದರೆ ಇಸ್ರಾ ಯೇಲ್ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.
Cross references
ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.
ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.
ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.
ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.