Home Bibles 2 ಸಮುವೇಲ 19:9 · ಕನ್ನಡ ಬೈಬಲ್
2 ಸಮುವೇಲ 19:9 · ಕನ್ನಡ ಬೈಬಲ್

ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.

Cross references

ಆದಿಕಾಂಡ 3:12

ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.

ನಿರ್ಗಮಕಾಂಡ 32:24

ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.

1 ಸಮುವೇಲ 17:50

ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.

1 ಸಮುವೇಲ 18:5

ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಅವನು ಬುದ್ಧಿ ಯಿಂದ ಕಾರ್ಯವನ್ನು ನಡಿಸುತ್ತಿದ್ದನು. ಆದದರಿಂದ ಸೌಲನು ಅವನನ್ನು ಯುದ್ಧಸ್ಥರ ಮೇಲೆ ಅಧಿಕಾರಿಯಾಗ ಮಾಡಿದನು. ಅವನು ಸಮಸ್ತ ಜನರ ದೃಷ್ಟಿಯಲ್ಲಿಯೂ ಸೌಲನ ಎಲ್ಲಾ ಸೇವಕರ ದೃಷ್ಟಿಯಲ್ಲಿಯೂ ಒಪ್ಪಿಗೆಯಾಗಿದ್ದನು.

1 ಸಮುವೇಲ 18:25

ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.

1 ಸಮುವೇಲ 19:5

ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

2 ಸಮುವೇಲ 5:20

ಆದಕಾರಣ ದಾವೀದನು ಬಾಳ್‌ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್‌ಪೆರಾಚೀಮ್‌ ಎಂದು ಹೆಸರಿ ಟ್ಟನು.

2 ಸಮುವೇಲ 8:1

ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.

2 ಸಮುವೇಲ 15:14

ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.

2 ಸಮುವೇಲ 18:17

ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.

ಯಾಕೋಬ 3:14

ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

Interlinear

Choose Theme