ಅದಕ್ಕೆ ಯೋವಾಬನು--ದೇವರ ಜೀವದಾಣೆ, ಉದಯದಲ್ಲಿ ನೀನು ಮಾತನಾಡದೆ ಹೋದರೆ ನಿಶ್ಚಯ ವಾಗಿ ಜನರಲ್ಲಿ ಪ್ರತಿ ಮನುಷ್ಯನು ತನ್ನ ಸಹೋ ದರನ ಹಿಂದಿನಿಂದ ತಿರುಗಿ ಹೋಗುತ್ತಿದ್ದನು ಅಂದನು.
Cross references
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
ಆಗ ಅಬ್ನೇರನು ಯೋವಾಬನಿಗೆ--ಯೌವನಸ್ಥರು ಎದ್ದು ನಮ್ಮ ಮುಂದೆ ಆಡಲಿ ಅಂದನು. ಅದಕ್ಕೆ ಯೋವಾಬನು--ಅವರು ಏಳಲಿ ಅಂದನು.
ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?