ಯಾಬೇಷ್ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
Cross references
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.
ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು.
ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.