ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
Cross references
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
ಅವಳು ಹೋಗಿ ಹೊಲದಲ್ಲಿ ಕೊಯ್ಯುವವರ ಹಿಂದೆ ಹಕ್ಕಲಾದು ಕೊಂಡಳು. ಅವಳಿಗೆ ಪ್ರಾಪ್ತಿಸಿದ ಆ ಹೊಲದ ಭಾಗ ಎಲೀಮೆಲೆಕನ ಸಂಬಂಧಿಕನಾದ ಬೋವಜನದಾಗಿತ್ತು.
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
ಇಗೋ, ಇಸ್ರಾಯೇಲ್ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.
ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆಯನ್ನು ಕೇಳಿ-- ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಏನು ಆಲೋಚನೆ ಹೇಳುತ್ತೀರಿ ಅಂದನು.
ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
ನಿನ್ನ ನೆರೆಯವನು ನಿನ್ನನ್ನು ಅವಮಾನಕ್ಕೆ ಗುರಿಮಾಡಿದಾಗ ಕಡೆಯಲ್ಲಿ ಏನು ಮಾಡಬೇಕೆಂಬದು ನೀನು ತಿಳಿಯ ದಂತೆ ದುಡುಕಿನಿಂದ ಕಲಹಮಾಡುವದಕ್ಕಾಗಿ ಹೋಗ ಬೇಡ.
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.