ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
Cross references
ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿ ತೆರೆದಿದ್ದಾರೆ; ಅವರು ಸಿಳ್ಳು ಹಾಕಿ ಹಲ್ಲು ಕಡಿಯುತ್ತಾ--ನಾವು ಅವಳನ್ನು ನುಂಗಿ ಬಿಟ್ಟಿದ್ದೇವೆ; ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ; ಅದನ್ನು ನಾವು ಕಂಡಿದ್ದೇವೆ; ನೋಡಿ ದ್ದೇವೆ ಎಂದು ಅವರು ಹೇಳುತ್ತಾರೆ.
ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
ಹೀಗೆ ನಾವು ಶಾಂತಿ ಸಮಾಧಾನಗಳಿಂದ ಕೂಡಿದ ಜೀವನ ವನ್ನು ಪೂರ್ಣ ಭಕ್ತಿಯಿಂದಲೂ ಗೌರವದಿಂದಲೂ ನಡಿಸುವದಕ್ಕಾಗುವದು.