ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
Cross references
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.
ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು.
ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
ಆದರೆ ಆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ಈ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.
ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
ಇದಲ್ಲದೆ, ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರೊಳಗೆ ಹದಿನೆಂಟು ಸಾವಿರ ಮಂದಿಯನ್ನು ಕೊಂದು ಎದೋಮಿನಲ್ಲಿ ಠಾಣ ಗಳನ್ನು ಇಟ್ಟನು. ಎದೋಮ್ಯರೆಲ್ಲರೂ ದಾವೀದನ ಸೇವಕರಾದರು.
ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.