ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
Cross references
ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು.
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು.
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.