ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
Cross references
ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ದೇಶದಲ್ಲಿ ಬರವು ಘೋರವಾಗಿತ್ತು.
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
ಆದದರಿಂದ ದಾವೀದನು--ನಾನು ಈ ಫಿಲಿಷ್ಟಿ ಯರನ್ನು ಹೊಡೆಯಲು ಹೋಗಲೋ ಎಂದು ಕರ್ತ ನನ್ನು ಕೇಳಿದನು; ಅದಕ್ಕೆ ಕರ್ತನು--ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯಾಲಾವನ್ನು ರಕ್ಷಿಸು ಅಂದನು.
ದಾವೀ ದನು ತಿರಿಗಿ ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ--ನೀನೆದ್ದು ಕೆಯಾಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡು ವೆನು ಅಂದನು.
ಕೆಯಾಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿನ್ನ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಕರ್ತನೇ, ದಯ ಮಾಡಿ ಇದನ್ನು ನಿನ್ನ ಸೇವಕನಿಗೆ ತಿಳಿಸು ಅಂದನು. ಅದಕ್ಕೆ ಕರ್ತನು--ಅವನು ಬರುವನು ಅಂದನು.
ಆಗ ದಾವೀದನು--ನಾನು ಫಿಲಿಷ್ಟಿಯರ ಮೇಲೆ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡು ವಿಯೋ ಎಂದು ಕರ್ತನನ್ನು ಕೇಳಿದನು. ಅದಕ್ಕೆ ಕರ್ತನು ದಾವೀದನಿಗೆ--ಹೋಗು; ಫಿಲಿಷ್ಟಿಯರನ್ನು ನಿನ್ನ ಕೈ ಯಲ್ಲಿ ಖಂಡಿತಾ ಕೊಡುವೆನು ಎಂದು ಹೇಳಿದನು.
ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.