Home Bibles 2 ಸಮುವೇಲ 21:14 · ಕನ್ನಡ ಬೈಬಲ್
2 ಸಮುವೇಲ 21:14 · ಕನ್ನಡ ಬೈಬಲ್

ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.

Cross references

ನಿರ್ಗಮಕಾಂಡ 32:27

ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.

ಅಂಕೆಗಳ ಪುಸ್ತಕ 25:8

ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್‌ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.

ಅಂಕೆಗಳ ಪುಸ್ತಕ 25:13

ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.

ಯೆಹೋಶುವ 7:26

ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

ಯೆಹೋಶುವ 18:28

ಚೇಲ, ಎಲೆಫ್‌, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್‌, ಕಿರ್ಯತ್‌ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.

1 ಸಮುವೇಲ 10:2

ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.

2 ಸಮುವೇಲ 3:32

ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.

2 ಸಮುವೇಲ 4:12

ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.

2 ಸಮುವೇಲ 24:25

ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.

1 ಅರಸುಗಳು 18:40

ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.

ಯೆರೆಮಿಯ 14:1

ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.

ಯೋವೇಲ 2:18

ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.

ಆಮೋಸ 7:1

ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.

ಯೋನ 1:15

ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.

ಜೆಕರ್ಯ 6:8

ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.

Interlinear

Choose Theme