ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
Cross references
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ--
ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.
ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ