ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
Cross references
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
ಆತನಿಗೆ ಹಾಡಿರಿ, ಆತನನ್ನು ಕೀರ್ತಿಸಿರಿ; ಆತನ ಅದ್ಭುತಗಳ ನ್ನೆಲ್ಲಾ ಧ್ಯಾನಿಸಿರಿ.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ.
ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.