ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
Cross references
ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.
ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.
ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.