ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
Cross references
ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್,
ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
ಆದರೆ ನನ್ನನ್ನೂ ಅಂದರೆ ನಿನ್ನ ಸೇವಕನಾದ ನನ್ನನ್ನೂ ಯೆಹೋಯಾ ದಾವನ ಮಗನಾದ ಬೆನಾಯನನ್ನೂ ನಿನ್ನ ಸೇವಕನಾದ ಸೊಲೊಮೋನನನ್ನೂ ಅವನು ಕರೆಯಲೇ ಇಲ್ಲ.
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.
ಇದಲ್ಲದೆ ಅರಣ್ಯದಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು; ಅವರ ಮುಖಗಳು ಸಿಂಹದ ಮುಖಗಳ ಹಾಗಿದ್ದವು ಮತ್ತು ಪರ್ವತಗಳ ಮೇಲೆ ಇರುವ ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.
ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.