ಅರಾರ್ಯನಾದ ಶಾರಾರನ ಮಗನಾದ ಅಹೀಯಾಮ್, ಮಾಕಾತ್ಯರಲ್ಲಿ ಒಬ್ಬನ ಮಗನಾಗಿರುವ ಅಹಸ್ಬೈ ಮಗನಾದ ಎಲೀಫೆ ಲೆಟನು, ಗಿಲೋವಿಯನಾಗಿರುವ ಅಹೀತೋಫೆಲನ ಮಗನಾದ ಎಲೀಯಾಮನು,
Cross references
ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.