ಅವರು ಕೈಯಿಂದ ತೆಗೆಯಲ್ಪಡುವ ವರಲ್ಲ; ಅವರನ್ನು ಮುಟ್ಟುವ ಮನುಷ್ಯನು ಕಬ್ಬಿಣ ವನ್ನೂ ಈಟಿಯ ಕಟ್ಟಿಗೆಯನ್ನೂ ಧರಿಸಿಕೊಂಡಿರ ಬೇಕು. ಅದೇ ಸ್ಥಳದಲ್ಲಿ ಬೆಂಕಿಯಿಂದ ಸುಟ್ಟು ಬಿಡಲ್ಪಡುವರು.
Cross references
ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.