ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
Cross references
ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು.
ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
ಆದರೆ ದಾವೀದನು ಇಪ್ಪತ್ತು ವರುಷಗಳೊಳಗೆ ಇದ್ದವರ ಲೆಕ್ಕತಕ್ಕೊಳ್ಳಲಿಲ್ಲ. ಯಾಕಂದರೆ ಇಸ್ರಾ ಯೇಲ್ಯರನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನೆಂದು ಕರ್ತನು ಹೇಳಿದ್ದನು.
ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ.