ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
Cross references
ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ--ನಾನು ನಿಮ್ಮ ದೇವ ರಾದ ಕರ್ತನಿಗೂ ನಿಮಗೂ ವಿರೋಧವಾಗಿ ಪಾಪ ಮಾಡಿದ್ದೇನೆ.
ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ.
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.