ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
Cross references
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
ಆದದ ರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪಿಸಿ ಕೊಂಡು ಅವರನ್ನು ಅರಾಮ್ಯರ ಅರಸನಾದ ಹಜಾ ಯೇಲನ ಕೈಯಲ್ಲಿಯೂ ಹಜಾಯೇಲನ ಮಗನಾದ ಬೆನ್ಹದದನ ಕೈಯಲ್ಲಿಯೂ ಎಲ್ಲಾ ದಿವಸಗಳಲ್ಲಿ ಒಪ್ಪಿಸಿ ಕೊಟ್ಟನು.
ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ