ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
Cross references
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
ಎರಡನೇ ತಿಂಗಳಿನ ವರ್ಗದ ಮೇಲೆ ಅಹೋಹಿಯನಾದ ದೋದೈಯು; ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ