Home Bibles 2 ಸಮುವೇಲ 24:16 · ಕನ್ನಡ ಬೈಬಲ್
2 ಸಮುವೇಲ 24:16 · ಕನ್ನಡ ಬೈಬಲ್

ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.

Cross references

ಆದಿಕಾಂಡ 6:6

ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.

ಆದಿಕಾಂಡ 10:16

ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ

ನಿರ್ಗಮಕಾಂಡ 9:28

ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.

ನಿರ್ಗಮಕಾಂಡ 12:13

ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.

ನಿರ್ಗಮಕಾಂಡ 12:23

ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.

ನಿರ್ಗಮಕಾಂಡ 32:14

ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

ಯೆಹೋಶುವ 15:63

ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

ನ್ಯಾಯಾಧಿಪತಿಗಳು 1:21

ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.

ನ್ಯಾಯಾಧಿಪತಿಗಳು 19:11

ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.

1 ಸಮುವೇಲ 15:11

ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.

2 ಸಮುವೇಲ 5:8

ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.

2 ಸಮುವೇಲ 24:18

ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.

1 ಅರಸುಗಳು 19:4

ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.

2 ಅರಸುಗಳು 19:35

ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.

1 ದಿನವೃತ್ತಾಂತ 1:14

ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ

1 ದಿನವೃತ್ತಾಂತ 21:15

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

2 ದಿನವೃತ್ತಾಂತ 3:1

ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.

2 ದಿನವೃತ್ತಾಂತ 32:21

ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

ಕೀರ್ತನೆಗಳು 35:6

ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.

ಕೀರ್ತನೆಗಳು 78:38

ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.

ಕೀರ್ತನೆಗಳು 90:13

ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.

ಕೀರ್ತನೆಗಳು 135:14

ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.

ಯೆಶಾಯ 27:8

ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.

ಯೆಶಾಯ 40:1

ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.

ಯೆಶಾಯ 57:16

ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.

ಯೆರೆಮಿಯ 18:7

ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

ಯೆರೆಮಿಯ 42:10

ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.

ಯೋವೇಲ 2:13

ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.

ಆಮೋಸ 7:3

ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.

ಆಮೋಸ 7:6

ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.

ಹಬಕ್ಕೂಕ 3:2

ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;

ಜೆಕರ್ಯ 9:7

ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.

ಮಾರ್ಕ 14:41

ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

2 ಕೊರಿಂಥದವರಿಗೆ 2:6

ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.

Interlinear

Choose Theme