ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
Cross references
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
ಆದದರಿಂದ (ಈಗ ಇದು ಸಾಕು.) ಇನ್ನು ಬಲವಾದ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋಗುವಂತೆ ಕರ್ತನನ್ನು ಬೇಡಿ ಕೊಳ್ಳಿರಿ, ನೀವು ಇಲ್ಲಿ ಇನ್ನು ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು ಅಂದನು.
ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಈ ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ;
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.