ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.
Cross references
ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು.
ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು.
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು.
ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು.
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ?
ಆದದರಿಂದ ಓ ಮನುಷ್ಯನೇ, ತೀರ್ಪು ಮಾಡುವ ನೀನು ಯಾವನಾಗಿದ್ದರೂ ನೆವವಿಲ್ಲದವನಾಗಿದ್ದೀ; ಹೇಗೆಂದರೆ ಬೇರೊಬ್ಬನಿಗೆ ತೀರ್ಪು ಮಾಡುವ ನೀನು ಅಂಥವುಗಳನ್ನೇ ಮಾಡುವವ ನಾದ್ದರಿಂದ ನಿನ್ನಷ್ಟಕ್ಕೆ ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು.