ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
Cross references
ಅವನು ಎದ್ದು ಕೋಲೂರಿಕೊಂಡು ತಿರುಗಾಡು ವಾಗ ಅವನಿಗೆ ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಅವನ ನಷ್ಟವಾದ ಸಮಯಕ್ಕಾಗಿ ಮಾತ್ರ ಅವನಿಗೆ ಹಣ ಕೊಡಬೇಕು. ಅವನನ್ನು ಪೂರ್ಣ ಸ್ವಸ್ಥಮಾಡಿಸಬೇಕು.
ವ್ಯಾಧಿಯು ಅವನ ತಲೆಯಲ್ಲಿದೆ ಯೆಂದೂ ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.
ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವು ಗಳಿಗೆ ಬದಲಾಗಿ ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವಿ; ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇರುವದಿಲ್ಲ.
ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಉದ್ಯೋ ಗವನ್ನು ಬೇರೊಬ್ಬನು ತಕ್ಕೊಳ್ಳಲಿ.
ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.