ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.
Cross references
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
ಆಗ ದಾವೀದನು ಗಡಿಸ್ಥಳದಲ್ಲಿ ಇದ್ದನು; ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.
ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.