ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು.
Cross references
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು.
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.