ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
Cross references
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.
ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.
ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ
ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.
ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.
ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.
ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.