ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು.
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.