ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
ಆದಾಗ್ಯೂ ಮಂದಿರವನ್ನು ನೀನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನು, ಅವನೇ ನನ್ನ ಹೆಸರಿಗಾಗಿ ಮಂದಿರವನ್ನು ಕಟ್ಟಿಸುವನು ಅಂದನು.
ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.
ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.
ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು.
ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.
ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ಆದಕಾರಣ ಇಸ್ರಾಯೇಲಿನ ದೇವರಾದ ಓ ಕರ್ತನೇ,--ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಹಾಗೆ ಅವರು ನನ್ನ ನ್ಯಾಯ ಪ್ರಮಾಣದ ಪ್ರಕಾರ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊ ಳ್ಳಲು ನಿನಗೆ ಮನುಷ್ಯನು ಕೊರತೆಯಾಗುವದಿಲ್ಲವೆಂದು ನೀನು ನನ್ನ ತಂದೆಯೂ ನಿನ್ನ ಸೇವಕನೂ ದಾವೀದನಿಗೆ ಹೇಳಿದ್ದನ್ನು ನಡಿಸು.
ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.