ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
Cross references
ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.
ಅವನು ಮಂಜೂಷವನ್ನು ಗುಡಾರಕ್ಕೆ ತಂದು ಮರೆಮಾಡುವ ತೆರೆಯನ್ನಿರಿಸಿದನು. ಕರ್ತನು ಹೇಳಿದ ಹಾಗೆಯೇ ಮೋಶೆಯು ಮಾಡಿದನು.
ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.
ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
ನಾತಾನನು ಈ ಸಕಲ ವಾಕ್ಯಗಳ ಪ್ರಕಾರ ವಾಗಿಯೂ ಸಕಲ ದರ್ಶನದ ಪ್ರಕಾರವಾಗಿಯೂ ದಾವೀದನ ಸಂಗಡ ಮಾತನಾಡಿದನು.
ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿದ ಡೇರೆಯ ಮಧ್ಯದಲ್ಲಿ ಇರಿಸಿದ ತರುವಾಯ ಅವರು ದೇವರ ಮುಂದೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.