ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.
Cross references
ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.
ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.