ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
Cross references
ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
ಇವುಗಳನ್ನು ಯೆಹೋಯಾ ದಾವನ ಮಗನಾದ ಬೆನಾಯನು ಮಾಡಿದ್ದರಿಂದ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರು ಗೊಂಡವನಾಗಿದ್ದನು.
ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ
ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.