ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
Cross references
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.
ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು.
ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.
ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
ಅವನು ಜೀವದಿಂದಿರುವ ವರೆಗೂ ಅರಸನ ಸಮ್ಮುಖದಲ್ಲಿ ರೊಟ್ಟಿಯನ್ನು ಯಾವಾಗಲೂ ತಿನ್ನುತ್ತಾ ಇದ್ದನು.ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು.
ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.
ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.