ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
Cross references
ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾನೆ; ನಮ್ಮ ಕರ್ತನಾದ ದೇವರು ಮರಣದಿಂದ ತಪ್ಪಿಸಲು ಶಕ್ತನಾಗಿದ್ದಾನೆ.
ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು.
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.