ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
Cross references
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.