ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
Cross references
ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಎಡೆಬಿಡದೆ ಪ್ರಾರ್ಥನೆ ಮಾಡಿರಿ.
ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.